ಉದ್ಯೋಗ ಕೊಡಿಸುವುದಾಗಿ ಮೂವರಿಗೆ ವಂಚನೆ
14 ಲಕ್ಷ ರೂ. ಟೋಪಿ ಹಾಕಿದ ರಿಪ್ಪನ್ಪೇಟೆಯ ಶ್ವೇತಾ : ದೂರು ದಾಖಲು

ರಿಪ್ಪ್ಪನ್ಪೇಟೆ,ಆ.30 : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್ಪೇಟೆ ಠಾಣೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ದೂರು ದಾಖಲಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾ ನಗರ ನಿವಾಸಿ ಅರ್ಜುನ್ ಅವರ ಪತ್ನಿ ಚೈತ್ರಾ ಎನ್ ಆರ್ ಅವರಿಗೆ ಪದವಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ 2022 ರ ಜು. 22 ರಂದು 19,600 ರೂ. ಶ್ವೇತಾ ರವರ ನಂಬರ್ ಗೆ ಹಣವನ್ನು ಫೋನ್ ಪೇ ಮುಖಾಂತರ ಹಾಕಿಸಿಕೊಂಡಿದ್ದರು. ಆನಂತರ ನಾನು ಡಿಡಿ ಹಾಕಿದ್ದೇ, ಬಂದ ನಂತರ ರಶೀದಿ ಕಳುಹಿಸುತ್ತೇನೆ ಅಂತ ಹೇಳಿದ್ದರು.
2022 ರ ಆ. 05 ರಂದು ನಿಮಗೆ ಉದ್ಯೋಗ ಸಿಕ್ಕಿದೆ 1.5 ಲಕ್ಷ ರೂ ಹಣ ಹಾಕಬೇಕು ಎಂದು ನಂಬಿಸಿ ರೂ. 50 ಸಾವಿರ ಹಣ ಮತ್ತು 2022 ಆ. 06 ರಂದು 1 ಲಕ್ಷ ಹಣವನ್ನು ಅದೇ ನಂಬರಿಗೆ ಫೋನ್ ಪೇ ಮುಖಾಂತರ ಹಾಕಿಸಿಕೊಂಡಿದ್ದು ನಿಮ್ಮದು ಮೆಡಿಕಲ್, ಪೊಲೀಸ್ ವೆರಿಫಿಕೇಷನ್ ಆಗಿದೆ ನಾವು ಹಣಕೊಟ್ಟು ಮಾಡಿಸಿದ್ದೇವೆ. ನವೆಂ ಬರ್ ೬ ರಂದು ಬೆಂಗಳೂರಿನ ರೈಲ್ವೆ ಕಚೇರಿಯಲ್ಲಿ ಸಹಿ ಮಾಡಬೇಕಿದ್ದು ಅದಕ್ಕೆ ಹಾಜರಾಗಬೇಕಿದೆ ಎಂದಿದ್ದರು.
ರೈಲ್ವೆ ಟಿಕೆಟ್ ಅವರೇ ಬುಕ್ ಮಾಡಿ, ನಂತರ ಮತ್ತು ಅವರ ಹೆಂಡತಿ ಚೈತ್ರಾ ಬೆಂಗಳೂರಿಗೆ ಹೋದಾಗ ಶ್ವೇತಾ ಅಲ್ಲಿ ರೈಲ್ವೆ ಕಚೇರಿಯ ಹತ್ತಿರ ಕರೆದುಕೊಂಡು ಹೋಗಿದ್ದಾರೆ. ಹೊರಗೆ ಕೂರಿಸಿ ಯಾರೋ ಆಫಿಸರ್ ಬಂದಿಲ್ಲ ಎಂದು ಹೇಳಿ ಯಾವುದೋ ಪೇಪರ್ ಗೆ ಸಹಿ ಮಾಡಿಸಿಕೊಂಡು ನಾಳೆ ನಾನೇ ಅಕಾರಿಗಳಿಗೆ ಕೊಡುತ್ತೇನೆ ಎಂದು ಹೇಳಿದ್ದಾರೆ ಎಂದು ಅರ್ಜುನ್ ದೂರಿನಲ್ಲಿ ತಿಳಿಸಿದ್ದಾರೆ.
ನಂತರ ಅಲ್ಲಿ ವಿಜಯಪುರದ ಪ್ರಶಾಂತ್ ದೇಶಪಾಂಡೆ ಎನ್ನುವವರನ್ನು ಪರಿಚಯಿಸಿ ಇವರೇ ಜಾಬ್ ಮಾಡಿಸಿಕೊಡುವವರು ಎಂದು ಹೇಳಿ ತೋರಿಸಿದ್ದರು. ಪ್ರಶಾಂತ್ ದೇಶಪಾಂಡೆ ನಿಮಗೆ ಕೆಲಸಕೊಡಿಸುವವರು. ಅವರೊಂದಿಗೆ ಇನ್ನು ಮುಂದೆ ಮಾತನಾಡಿಕೊಳ್ಳಿ ಎಂದು ಅವರ ಫೋನ್ ನಂಬರ್ಗಳನ್ನು ಕೊಟ್ಟಿದ್ದಾರೆ.
2023 ರ ಜ. 18 ರಂದು ಪ್ರಶಾಂತ್ ದೇಶಪಾಂಡೆ ಫೋನ್ ಮಾಡಿ ನಿಮ್ಮ ಹೆಂಡತಿಗೆ ಮಾತ್ರ ಜಾಬ್ ಆಗಿದೆ. ಬೆಂಗಳೂರಿಗೆ ಬನ್ನಿ ಎಂದು ಹೇಳಿದಾಗ ಅರ್ಜುನ್ ತನ್ನ ಸ್ನೇಹಿತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ನಿಲುವಾಗಿಲು ಗ್ರಾಮದ ಆದರ್ಶ ಎನ್ನುವವರನ್ನು ಕರೆದುಕೊಂಡು ಹೋಗಿದ್ದರು. ಅಲ್ಲಿ ಪ್ರಶಾಂತ್ ದೇಶಪಾಂಡೆ ಆದರ್ಶನ ಪರಿಚಯ ಮಾಡಿಕೊಂಡು ಹುಬ್ಬಳ್ಳಿಯಲ್ಲಿ ರೈಲ್ವೆ ಕೆಲಸ ನಡೆಯುತ್ತಿದೆ.
ನಿನಗೆ ಟೆಂಡರ್ ಕೆಲಸ ಕೊಡಿಸುವು ದಾಗಿ ಹೇಳಿ ನಂಬಿಸಿ ಅವರಿಂದ 2023 ರ ಮಾ.1 ರಂದು ಮಧ್ಯಾಹ್ನ 3:30 ಗಂಟೆಯ ಸಮಯದಲ್ಲಿ ಬೆಂಗಳೂರಿನ ಗಾಂನಗರದ ಚಿಕನ್ ಕೌಂಟಿ ಹೊಟೇಲ್ ನಲ್ಲಿ 5 ಲಕ್ಷ ರೂಪಾಯಿ ನಗದು ಹಣವನ್ನು ಪಡೆದುಕೊಂಡಿದ್ದಾರೆ. ಆಗಾಗ ಆದರ್ಶ ನ ನಂಬರಿನಿಂದ ಪ್ರಶಾಂತ ದೇಶಪಾಂಡೆಯ ನಂಬರಿಗೆ ಫೋನ್ ಪೇ ಮುಖಾಂತರ 1,26,650 ರೂ. ಹಣ ಹಾಕಿಸಿಕೊಂಡಿದ್ದಾನೆ.
ದೂರುದಾರ ಅರ್ಜುನ್ ಅವರಿಗೆ 2023 ಫೆ.02 ರಂದು ನೇಮಕಾತಿ ಆದೇಶ ಬಂದಿದೆ. 60 ಸಾವಿರ ರೂ. ಹಾಕಿ. ನಿಮಗೆ ಮನೆಗೆ ಕಳುಹಿಸಿಕೊಡುತ್ತೇನೆ ಎಂದು ಹೇಳಿ 2023 ಫೆ.06 ರಂದು ಹಿರಿಯ ಅಕಾರಿ ನಿಮಗೆ ಉಸ್ಯೋಗವನ್ನು ನೀಡಿದ್ದಾರೆ. ಅವರಿಗೆ ವಾಚ್ ಪ್ರೆಸೆಂಟ್ ಮಾಡುವೆ ಎಂದು ಹೇಳಿ 4,500 ರೂ. ಹಾಕಿಸಿಕೊಂಡಿದ್ದರೆ. ಫೆ. 16 ರಂದು 15 ಸಾವಿರ ರೂ. ಹಣವನ್ನು ಮಾ. 02 ರಂದು 15 ಸಾವಿರ ಹಣ ವನ್ನು ವಿವಿಧ ಕಾರಣ ಹೇಳಿ ಹಣವನ್ನು ಹಾಕಿಸಿ ಕೊಂಡಿದ್ದು ಏ.06 ರಂದು ಬೆಂಗಳೂರಿನಲ್ಲಿ ಚಿಕನ್ ಕೌಂಟಿ ಹೊಟೇಲ್ ನಲ್ಲಿ, 1.20 ಲಕ್ಷ ರೂ. ನಗದು ಹಣವನ್ನು ಅರ್ಜುನ್ ರಿಂದ ಪಡೆದುಕೊಂಡಿದ್ದಾನೆ.
ಶಿವಮೊಗ್ಗ ಮಲವಗೊಪ್ಪದ ನವೀನ್ಕುಮಾರ್ ಬಿ.ವಿ ಅವರಿಗೆ ಶ್ವೇತಾ ಪರಿಚಯ ಮಾಡಿಕೊಂಡು ಅವರ ಪತ್ನಿ ಅಶ್ವಿನಿಗೆ ರೈಲ್ವೆ ಇಲಾಖೆಯಲ್ಲಿ ಡಿ. ದರ್ಜೆ ನೌಕರಿ ಕೊಡಿಸುವುದಾಗಿ 3,42,500 ರೂ. ಹಣವನ್ನು ಶ್ವೇತಾ ರವರು ಫೋನ್ ಫೇ ಹಾಗೂ ನೆಫ್ಟ್ ಮೂಲಕ ಹಾಕಿಸಿಕೊಂಡಿರುವುದಾಗಿ ನವೀನ್ ಅರ್ಜುನ್ ಗೆ ತಿಳಿಸಿರುತ್ತಾರೆ.
ಅರ್ಜುನ್ ರಿಂದ ಒಟ್ಟು 4.02 ಲಕ್ಷ ರೂ. ಹಣವನ್ನು ಆದರ್ಶ ನಿಂದ 6.50 ಲಕ್ಷ ರೂ. ಹಣವನ್ನು ನವೀನ್ ರವರಿಂದ 3,42,500 ರೂ. ಹಣವನ್ನು ಕೆಲಸ ಕೊಡಿಸುವುದಾಗಿ ನಂಬಿಸಿ ಪಡೆದುಕೊಂಡು ಶ್ವೇತಾ ಮತ್ತು ಪ್ರಶಾಂತ ದೇಶಪಾಂಡೆ ಯಾವ ಕೆಲಸವನ್ನು ಕೊಡಿಸದೇ ವಿವಿಧ ಸಬೂಬುಗಳನ್ನು ಹೇಳುತ್ತಾ ಒಂದು ಈಗ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರೆಂದು ದೂರು ನೀಡಿದ್ದಾರೆ.
ದೂರುದಾರ ಅರ್ಜುನ್, ಆದರ್ಶ ಮತ್ತು ನವೀನ್ ಆ.22 ರಂದು ಬೆಳಿಗ್ಗೆ 10.00 ಗಂಟೆಗೆ ಹಣವನ್ನು ಕೇಳಲು ರಿಪ್ಪನ್ಪೇಟೆಯ ಶ್ವೇತಾ ಅವರ ಶಾಪ್ಗೆ ಬಂದಾಗ ನಿಮ್ಮ ಮೇಲೆ ರೇಪ್ ಕೇಸ್ ಹಾಕಿ ಒಳಗೆ ಕಳುಹಿಸಿಬಿಡುತ್ತೇನೆಂದು ಬೆದರಿಕೆ ಹಾಕಿದ್ದಾರೆ ಎಂದು ಅರ್ಜುನ್ ದೂರಿನಲ್ಲಿ ತಿಳಿಸಿದ್ದಾರೆ.
ನಂತರ ಅವರ ಮೇಲೆ ಅನುಮಾನ ಬಂದಿದ್ದು, ನಮಗೆ ಕೆಲಸ ಕೊಡಿಸುವುದಾಗಿ ಹೇಳಿ ನಮ್ಮನ್ನು ನಂಬಿಸಿ ನಮ್ಮಿಂದ ಹಣವನ್ನು ಪಡೆದುಕೊಂಡು ಮೋಸ ಮಾಡಿ ನಮಗೆ ಹಣ ಕೇಳಲು ಹೋದಾಗ ಬೆದರಿಕೆ ಹಾಕಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿ ಕೊಡುವಂತೆ ಅರ್ಜುನ್ ರಿಪ್ಪನ್ಪೇಟೆ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಐಪಿಸಿ ಸೆಕ್ಷನ್ ೪೦೬, ೪೨೦, ೫೦೬ ರ ಅಡಿಯಲ್ಲಿ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.