ಸೆ.12 ರ ಬಳಿಕ ತ.ನಾಡಿಗೆ ನೀರಿಲ್ಲ

ನವದೆಹಲಿ,ಸೆ.6: ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳೆ ರಡೂ ಭೀಕರ ಬರ ಪರಿಸ್ಥಿತಿ ಎದುರಿ ಸುತ್ತಿದ್ದು, 2023 ರ ಸೆಪ್ಟೆಂಬರ್ 12 ರ ನಂತರ ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವ ಜಲಸಂಪ ನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆಗಸ್ಟ್ 29 ರಿಂದ ಸೆಪ್ಟೆಂಬರ್ 11 ರ ವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಕಾರ (ಸಿಡಬ್ಲ್ಯುಎಂಎ) ನಿರ್ದೇಶನ ನೀಡಿತ್ತು. ಆ ಪ್ರಕಾರ, ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿದೆ. ನೀರು ಬಿಡುಗಡೆ ಪ್ರಮಾ ಣವನ್ನು ದಿನಕ್ಕೆ 5 ಸಾವಿರ ಕ್ಯೂಸೆಕ್ನಿಂದ ೩ ಸಾವಿರ ಕ್ಯೂಸೆಕ್ಗೆ ಇಳಿಸಬೇಕು ಎಂದು ಆಗ್ರಹಿಸಿ ಪ್ರಾಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ’ ಎಂದೂ ತಿಳಿಸಿದ್ದಾರೆ.
ಪ್ರಾಕಾರದ ಆದೇಶದ ಪ್ರಕಾರ, ಆಗಸ್ಟ್ 29 ರಿಂದ ಸೆಪ್ಟೆಂಬರ್ 3 ರ ವರೆಗೆ 30 ಸಾವಿರ ಕ್ಯೂಸೆಕ್ ನೀರನ್ನು ಬಿಡಬೇಕಿತ್ತು. ಆದರೆ, ತಮಿಳುನಾಡಿಗೆ 37,869 ಕ್ಯೂಸೆಕ್ ನೀರನ್ನು ಬಿಡಲಾ ಗಿದೆ. ರಾಜ್ಯವು ಹೆಚ್ಚುವರಿಯಾಗಿ 7,869 ಕ್ಯೂಸೆಕ್ ನೀರನ್ನು ಬಿಟ್ಟಿದೆ. ಮುಂದಿನ ದಿನಗಳಲ್ಲಿ ನೀರಿನ ಬಿಡುಗಡೆ ಪ್ರಮಾಣವನ್ನು ಹೊಂದಾ ಣಿಕೆ ಮಾಡುವ ಅಕಾರವನ್ನು ರಾಜ್ಯ ಹೊಂದಿದೆ ಎಂದು ಹೇಳಿದ್ದಾರೆ.
ಕಾವೇರಿ ಕಣಿವೆಯಲ್ಲಿ ಶೇ 60.12 ರಷ್ಟು ಮಳೆ ಕೊರತೆಯಾಗಿದೆ ಎಂದು ಪ್ರಾಕಾರ ಅಂದಾಜಿಸಿದೆ. ಆದರೆ, ಕರ್ನಾಟಕದ ಕಾವೇರಿ ಜಲಾ ನಯನ ಪ್ರದೇಶದಲ್ಲಿ ಶೇ 66 ರಷ್ಟು ಮಳೆ ಕೊರತೆ ಆಗಿದೆ. ಇದರಿಂದಾಗಿ, ಜಲಾಶಯಗಳಿಗೆ ಒಳಹರಿವು ಗಣ ನೀಯವಾಗಿ ಕಡಿಮೆ ಆಗಿದೆ. ರಾಜ್ಯದ ಕಾವೇರಿ ಹಾಗೂ ಕೃಷ್ಣಾ ಕಣಿವೆಗಳಲ್ಲಿ ಗಂಭೀರ ಬರ ಎದುರಾಗುವ ಸನ್ನಿವೇಶ ಇದೆ. ಇದರಿಂದಾಗಿ, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಲ್ಲಿ ಸದ್ಯ 56 ಟಿಎಂಸಿ ಅಡಿ ಮಾತ್ರ ನೀರು ಇದೆ. ಮುಂದಿನ ದಿನಗಳಲ್ಲಿ 40 ಟಿಎಂಸಿ ನೀರು ಜಲಾಶ ಯಗಳಿಗೆ ಹರಿದು ಬರಬಹುದು ಎಂದು ಅಂದಾಜಿಸಲಾಗಿದೆ. ಪಟ್ಟಣ ಗಳ ಹಾಗೂ ನಗರಗಳ ಕುಡಿಯುವ ನೀರು, ಬೆಳೆಗಳಿಗೆ ನೀರು ಹರಿಸಲು ರಾಜ್ಯಕ್ಕೆ 140 ಟಿಎಂಸಿ ಅಡಿಯಷ್ಟು ನೀರು ಬೇಕಾಗಿದೆ. ಈ ಸಂಬಂಧ ಪ್ರಾಕಾರಕ್ಕೆ ಆಗಸ್ಟ್ನಲ್ಲೇ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಹೀಗಾಗಿ, 12 ರ ನಂತರ ನೀರು ಬಿಡುಗಡೆ ಕಾರ್ಯ ಸಾಧ್ಯ ಆಗದಿರಬಹುದು ಎಂದೂ ಅವರು ಹೇಳಿದ್ದಾರೆ.