ಜಲಮೂಲ ಸದ್ಬಳಕೆಗೆ ಸಚಿವರ ಭೋಸರಾಜ್ ಸೂಚನೆ
ಶಿವಮೊಗ್ಗ ಜಿಲ್ಲಾ ಸಣ್ಣ ನೀರಾವರಿ ಯೋಜನೆ ಕುರಿತ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಸೆ.26: ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ, ನೀರಿನ ಸದ್ಬಳಕೆಯಾಗದೆ ಬೇಸಿ ಗೆಯಲ್ಲಿ ಬರದ ಪರಿಸ್ಥಿತಿ ಎದುರಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಜಲಮೂಲಗಳಲ್ಲಿನ ನೀರಿನ ಸದ್ಬಳ ಕೆಗೆ ಅಗತ್ಯ ಯೋಜನೆಗಳನ್ನ ರೂಪಿಸಲು ಒತ್ತು ನೀಡಬೇಕು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಸಿದಂತೆ ಸಣ್ಣ ನೀರಾವರಿ ಇಲಾಖೆಯ ಯೋಜನೆ ಮತ್ತು ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಸಭೆಯಲ್ಲಿ ಪಾಲ್ಗೊಂಡು ಸಣ್ಣ ನೀರಾವರಿ ಯೋಜನೆಗಳ ಬಗ್ಗೆ ವಿಸ್ತ್ರುತ ಮಾಹಿತಿ ಪಡೆದುಕೊಂಡರು.
ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಜಲಮೂಲಗಳಿಗೆ ಕೊರತೆ ಯಿಲ್ಲ. ಉತ್ತಮ ಮಳೆಯೂ ಆಗುತ್ತದೆ. ಆದರೆ, ನೀರನ್ನ ಸಮರ್ಪಕವಾಗಿ ಬಳಸಲು ಅಗತ್ಯ ಯೋಜ ನೆಗಳು ಇಲ್ಲದ ಕಾರಣ ನೀರು ಹರಿದು ಹೋಗುತ್ತಿದೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆರೆಗಳ ಅಭಿವೃದ್ದಿ ಮತ್ತು ನೀರಿನ ಸಮರ್ಪಕ ಬಳಕೆಗೆ ಯೋಜನೆಗಳ ಅಗತ್ಯವಿದೆ ಎಂದು ಹೇಳಿದರು.
ಜಲಮೂಲಗಳ ನೀರಿನ ಸದ್ಬಳಕೆಗೆ ಒತ್ತು ನೀಡಿ:
ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ, ಅದರಲ್ಲಿನ ನೀರಿನ ಸದ್ಬಳಕೆ ನಿರೀಕ್ಷತ ಮಟ್ಟದಲ್ಲಿ ಸಾಧ್ಯವಾಗುತ್ತಿಲ್ಲ. ಜಲಮೂಲಗಳಲ್ಲಿನ ನೀರಿನ ಉಳಿತಾಯ, ಸಮರ್ಪಕ ಬಳಕೆಯಿಂದ ಅಂತರ್ಜಲ ಹೆಚ್ಚಳ ಸಾಧ್ಯ. ಅಲ್ಲದೇ, ಬರದಂತಹ ಪರಿಸ್ಥಿತಿಯಲ್ಲಿ ಈ ಯೋಜನೆಗಳು ನಮ್ಮ ಕೈ ಹಿಡಿಯುತ್ತವೆ. ಕೆರೆಗಳನ್ನು ತುಂಬಿಸುವ, ನೀರನ್ನ ಸಂಗ್ರಹಿಸಿ ಅಂತ ರ್ಜಲ ಹೆಚ್ಚಳಕ್ಕೆ ಅನುವು ಮಾಡಿಕೊಡುವ ಯೋಜನೆ ಗಳಿಗೆ ಒತ್ತು ನೀಡಬೇಕು ಎಂದು ಸಚಿವ ಎನ್ ಎಸ್ ಭೋಸರಾಜು ಸೂಚನೆ ನೀಡಿದರು.
ಪ್ರಗತಿಯಲ್ಲಿರುವ ಏತ ನೀರಾವರಿ ಯೋಜನೆ ಗಳನ್ನ ಕಾಲಮಿತಿಯಲ್ಲಿ ಪೂರ್ಣಗೊಳಿಸಿ:
29 ಕೆರೆಗಳಿಗೆ ನೀರು ತುಂಬಿಸುವ ಹೊಳೆ ಹಸನವಾಡಿ ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಮೊದಲ ಹಂತದಲ್ಲಿ 12 ಕೆರೆಗಳನ್ನು ತುಂಬಿಸುವ ಕಾರ್ಯವನ್ನು ಡಿಸೆಂಬರ್ ತಿಂಗಳೊಳಗಾಗಿ ಮುಗಿಸಬೇಕು. ಮಂಡ ಗದ್ದೆ ಏತ ನೀರಾವರಿ ಯೋಜನೆಯೂ ಕೊನೆಯ ಹಂತದಲ್ಲಿದ್ದು ಅದನ್ನೂ ಶೀಘ್ರ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ದಗೊಳಿಸಿ ಎಂದು ಸಚಿವರು ಸೂಚನೆ ನೀಡಿದರು.
ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಗೆ ಭೇಟಿ:
ಅಕ್ಟೋಬರ್ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಲಾಗು ವುದು. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲೆಯ ಕಾಮ ಗಾರಿಗಳ ವಸ್ತುಸ್ಥಿತಿಯ ಬಗ್ಗೆ ವರದಿಯನ್ನು ನೀಡು ವಂತೆ ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಸೂಪರಿಂಟೆಂಡೆಂಟ್ ಇಂಜಿನಿಯರ್ಗೆ ಸೂಚನೆ ನೀಡಿದರು.
ಕಾಮಗಾರಿ ಪೂರ್ಣಗೊಂಡು ಸಣ್ಣ ಸಣ್ಣ ಸಮಸ್ಯೆಗಳಿಂದ ಫಲಾನುಭವಿಗಳಿಗೆ ಅನುಕೂಲವಾಗದೇ ಇದ್ದಲ್ಲಿ ಕಾಮಗಾರಿಯ ಉದ್ದೇಶ ಈಡೇರಿದಂತೆ ಆಗುವುದಿಲ್ಲ. ಈ ನಿಟ್ಟಿನಲ್ಲಿ ಹಿರಿಯ ಅಕಾರಿಗಳು ಕ್ರಮವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಯೋಜನೆಗಳು:
ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಪ್ರಸ್ತುತ 57 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳಲ್ಲಿ 27 ಕೆರೆಗಳ ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 1300 ಕೆರೆಗಳಿವೆ. ಬೇಸಿಗೆಯ ಸಮಯದಲ್ಲಿ ಜಿಲ್ಲೆಯಲ್ಲಿ ನೀರಿನ ಅಭಾವ ಕಂಡು ಬರುತ್ತದೆ. ನೀರಿನ ಅಭಾವವನ್ನು ನೀಗಿಸುವ ನಿಟ್ಟಿನಲ್ಲಿ ಕೆರೆಗೆ ನೀರು ತುಂಬಿಸುವ ಏತ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳುವ ಅವಶ್ಯಕತೆಯಿದ್ದು, ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನ ಚುರುಕುಗೊಳಿಸಬೇಕು ಎಂದು ಸಚಿವ ಎನ್ ಎಸ್ ಭೋಸರಾಜು ಅಕಾರಿಗಳಿಗೆ ಸೂಚನೆ ನೀಡಿದರು.