ಲೈನ್ ಮ್ಯಾನ್ ಅಗ್ನಿಗೆ ಆಹುತಿ

ಲೈನ್ ಮ್ಯಾನ್ ಅಗ್ನಿಗೆ ಆಹುತಿ
ಶಿವಮೊಗ್ಗ ಜಿಲ್ಲೆ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ವಿದ್ಯುತ್ ಶಾಕ್​ ನಿಂದ ಓರ್ವ ಲೈನ್ ಮ್ಯಾನ್​ ಸಾವನ್ನಪ್ಪಿದ್ದು ಇನ್ನಿಬ್ಬರಿಗೆ ಗಾಯಗಳಾಗಿವೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಈ ಮೊದಲೇ ಈ ಭಾಗದಲ್ಲಿ ಮೆಂಟೇನ್ಸ್​ ಕಾಮಗಾರಿ ಬಗ್ಗೆ ಮೆಸ್ಕಾಂ ಪ್ರಕಟಣೆ ನೀಡಿತ್ತು.
ಈ ಲಿಂಕ್ ಅನ್ನು ಕ್ಲಿಕ್ ಮಾಡಿ  http://www.krantideepa.com/
ಅದರಂತೆ ಬೆಳಗ್ಗೆ ಒಂಬತ್ತು ಗಂಟೆಗೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಈ ಮಧ್ಯೆ ಇಂಡಸ್ಟ್ರೀಯಲ್ ಏರಿಯಾದ ಮೊದಲನೇ ತಿರುವಿನ ರಸ್ತೆಯಲ್ಲಿ ಇರುವ ಹೈಟೆನ್ಶನ್​ ಕಂಬವನ್ನು ಮೆಸ್ಕಾಂ ಸಿಬ್ಬಂದಿ ಹತ್ತಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಪ್ರವಹಿಸಿ ಕಿರಣ್ ಎಂಬಾತ ಕಂಬದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನೂ ಸುನಿಲ್ ಹಾಗೂ ಭಾಸ್ಕರ್​ ಎಂಬವರಿಗೆ ಘಟನೆಯಲ್ಲಿ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು, ಅವರ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. 
ವಿದ್ಯುತ್ ಲೈನ್​ ಚೇಂಜ್ ವೇಳೆ ಈ ದುರ್ಘಟನೆ ಸಂಭವಿಸಿತಾ? ಅಥವಾ ಜನರೇಟರ್​ಗಳ ವಿದ್ಯುತ್ ರಿವರ್ಸ್​ ಆಗಿ ಘಟನೆ ಸಂಭವಿಸಿತಾ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಪೊಲೀಸ್​ ಇಲಾಖೆ ಸಿಬ್ಬಂದಿ ಭೇಟಿಕೊಟ್ಟಿದ್ದು ಪರಿಶೀಲನೆ ನಡೆಸ್ತಿದ್ದಾರೆ. ಇನ್ನೂ ಸಿಬ್ಬಂದಿಯೊಬ್ಬ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿರುವುದು ಲೈನ್ ಮ್ಯಾನ್​ಗಳಲ್ಲಿ ಆತಂಕ ಮೂಡಿಸಿದೆ.